ಕೆಂಪೇಗೌಡರ ದೂರದೃಷ್ಟಿ ಇಂದಿನ ಆಡಳಿತಕ್ಕೆ ಮಾದರಿ: ಟಿ.ಎಂ. ಶಹೀದ್ ತೆಕ್ಕಿಲ್
ವಿಶ್ವವಿದ್ಯಾನಿಲಯ ಕಾಲೇಜಿನ ನಿಕಟಪೂರ್ವ ಪ್ರಿನ್ಸಿಪಾಲ್ ಡಾ. ಗಣಪತಿ ಗೌಡ ನಾಡಪ್ರಭು ಕೆಂಪೇಗೌಡರವರ ಬಗ್ಗೆ ಉಪನ್ಯಾಸ ನೀಡಿ, ಬಹು ಆಯಾಮವನ್ನು ಹೊಂದಿರುವ ಸೃಜನಶೀಲ ವ್ಯಕ್ತಿಯಾಗಿದ್ದ ಕೆಂಪೇಗೌಡ, ಬೆಂಗಳೂರನ್ನು ನಿರ್ಮಿಸಲು ಬಹಳಷ್ಟು ಶ್ರಮಪಟ್ಟಿದ್ದಾರೆ. ತಮ್ಮ ಜೀವನವನ್ನೇ ಸಮರ್ಪಿಸಿದ್ದಾರೆ. ಅವರು ಕನ್ನಡ ನಾಡಿನ ಅಸ್ಮಿತೆಯಾಗಿದ್ದಾರೆ. ಎಲ್ಲಾ ಧರ್ಮಗಳ ಬೆಳವಣಿಗೆಗೆ ಶ್ರಮಿಸಿ, ಚಿಂತನೆಯನ್ನು ಬೆಳೆಸಿಕೊಂಡವರಾಗಿದ್ದಾರೆ ಎಂದು ಹೇಳಿದರು.
ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೊ, ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಮಾತನಾಡಿದರು.
ಕೆಂಪೇಗೌಡ ಜಯಂತಿಯ ಅಂಗವಾಗಿ ಕಾಲೇಜಿನಲ್ಲಿ ನಾನಾ ಸ್ಪರ್ಧೆಗಳನ್ನು ನಡೆಸಲಾಗಿದ್ದು, ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಲ್ಲಾಳ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್ ಕೆ.ಎಸ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ, ದ.ಕ ಜಿಲ್ಲಾ ಒಕ್ಕಲಿಗ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ., ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಬಲ್ಮಠದ ಪ್ರಿನ್ಸಿಪಾಲ್ ವನಿತಾ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ ಜಿ. ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ವಸುಧಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕಾಲೇಜಿನ ಇತಿಹಾಸ ಪ್ರಾದ್ಯಾಪ್ಕಕ ಸಂತೋಷ್ ವಂದಿಸಿದರು. ಕನ್ನಡ ಉಪನ್ಯಾಸಕಿ ಯಶೋಧ ಕೆ. ಕಾರ್ಯಕ್ರಮ ನಿರೂಪಿಸಿದರು.

