ದಿಶಾ ಪೂಜಾರಿ, ಅಗ್ನಿವೀರ್ ವಿರಾಜ್ ಪೂಜಾರಿಗೆ ಸಂಸದರಿಂದ ಸಮ್ಮಾನ
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಸಾಧಕರ ಯಶಸ್ಸಿನ ಹಿಂದೆ ಕುಟುಂಬದವರು ಹಾಗೂ ಶಿಕ್ಷಕರ ಶ್ರಮವೂ ಅಡಗಿದ್ದು, ಯುವಕರು ತಮ್ಮ ಗುರಿಯತ್ತ ನಿರಂತರ ಪ್ರಯತ್ನ ಮಾಡಬೇಕು ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸುನೀಲ್ ಆಳ್ವ, ಶಾಂತಿಪ್ರಸಾದ್ ಹೆಗ್ಡೆ, ಮೂಲ್ಕಿ–ಮೂಡುಬಿದಿರೆ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ ಮತ್ತು ಹರಿಪ್ರಸಾದ್, ಮೂಡುಬಿದಿರೆ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಪುತ್ತಿಗೆ ಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್ ಇರುವೈಲ್, ಪುರಸಭೆಯ ಮಾಜಿ ಉಪಾಧ್ಯಕ್ಷ ನಾಗರಾಜ ಪೂಜಾರಿ, ಯುವ ಮೋಚಾ೯ದ ಕಾಯ೯ದಶಿ೯ ಭರತ್ ಶೆಟ್ಟಿ, ಪ್ರಮುಖರಾದ ಕೆ.ಆರ್. ಪಂಡಿತ್, ಎಂ.ಎಸ್. ಕೋಟ್ಯಾನ್, ಕೆ. ಕೃಷ್ಣರಾಜ ಹೆಗ್ಡೆ, ಈಶ್ವರ್ ಕಟೀಲ್, ಮೇಘನಾಥ ಶೆಟ್ಟಿ, ಸುಕೇಶ್ ಶೆಟ್ಟಿ ಎದಮಾರು, ಅಶ್ವತ್ಥ್ ಪಣಪಿಲ, ದೀಕ್ಷಿತ್ ಪಣಪಿಲ, ಸಚಿನ್ ಪಣಪಿಲ, ಜೋಯ್ಲಸ್ ಡಿ'ಸೋಜಾ ತಾಕೊಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
'ಮಾ ಕೆ ನಾಮ್ ಏಕ್ ಪೇಡ್' ಎಂಬ ಕೇಂದ್ರ ಸರಕಾರದ ಯೋಜನೆಯಂಗವಾಗಿ ಆಲಂಗಾರು ದೇವಸ್ಥಾನದ ಆವರಣದಲ್ಲಿ ಸಂಸದ ಬ್ರಿಜೇಶ್ ಚೌಟ ಅವರು ಗಿಡವನ್ನು ನೆಟ್ಟರು.

