ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿ: ಮಿಜಾರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ
Friday, June 5, 2026
ಮೂಡುಬಿದಿರೆ: ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿಯಿಂದ ಮಂಗಳೂರು-ಮೂಡುಬಿದಿರೆ ಮಿಜಾರಿನಲ್ಲಿ ರಸ್ತೆಯು ಮಳೆಗೆ ಕೊಚ್ಚಿ ಹೋಗಿ ಅಪಾಯದ ಸ್ಥಿತಿ ಎದುರಾಗಿದೆ.
ರಾ.ಹೆ. ನಿಮಿ೯ಸುವ ಮೊದಲು ವೈಜ್ಞಾನಿಕ ರೀತಿಯಲ್ಲಿ ಸವೀ೯ಸ್ ರಸ್ತೆಯನ್ನು ನಿಮಿ೯ಸದೆ ನೀರು ಹರಿಯುವ ದೊಡ್ಡ ಸೇತುವೆ ಜಾಗದಲ್ಲಿ ಅತೀ ಚಿಕ್ಕ ಮೋರಿ ನಿರ್ಮಿಸಿರುವುದರಿಂದಲೇ ರಸ್ತೆ ಕುಸಿಯಲು ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದರು.
ಇದೀಗ ಹೊಂಡವಾಗಿರುವ ರಸ್ತೆಯ ಬದಿಗೆ ಕಲ್ಲುಗಳನ್ನು ಮಾತ್ರ ಇಡಲಾಗಿದೆ ಹೊರತು ಯಾವುದೇ ಸುರಕ್ಷತಾ ಕ್ರಮದ ಸೂಚನಾ ಫಲಕಗಳನ್ನು ಸಂಬಂಧಪಟ್ಟ ಇಲಾಖೆಯವರು ಅಳವಡಿಸಿಲ್ಲ ಇದರಿಂದಾಗಿ ರಾತ್ರಿ ಸಂಚರಿಸುವ ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ.
ಈ ಬಗ್ಗೆ ಮಾಧ್ಯಮದ ಜತೆ ಮಾತನಾಡಿದ ಸ್ಥಳೀಯರಾದ ಗಣೇಶ್ ಅವರು ಹೈವೇ ಕಾಮಗಾರಿಯು ಕಳಪೆಯಾಗಿದೆ. ಅಗತ್ಯವಿರುವಲ್ಲಿ ಮೋರಿ ರಚನೆ ಮಾಡದೆ ನೀರು ಹರಿದು ಹೋಗಲು ಸ್ಥಳವಿಲ್ಲದೆ ರಸ್ತೆಯಲ್ಲಿಯೇ ನಿಲ್ಲುವುದರಿಂದ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಎರಡ್ಮೂರು ಕಡೆಗಳಲ್ಲಿ ನಿಮಿ೯ಸಿರುವ ಮೋರಿಗಳಲ್ಲಿ ಸರಿಯಾಗಿ ನೀರು ಹರಿದು ಹೋಗದಿರುವುದರಿಂದಲೇ ಅನಾಹುತಕ್ಕೆ ಕಾರಣವಾಗಿದೆ ಎಂದಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯವರು ಮೊದಲು ಸವೀ೯ಸ್ ರಸ್ತೆಯನ್ನು ನಿಮಿ೯ಸದೆ ಇರುವುದರಿಂದ ಅನಾಹುತಗಳು ಸಂಭವಿಸುತ್ತಿದೆ. ಈ ಬಗ್ಗೆ ನಾವು ಇಲಾಖೆಯ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದಿದ್ದೇವೆ ಆದರೆ ಪ್ರಯೋಜನವಾಗಿಲ್ಲ. ಮಿಜಾರಿನಲ್ಲಿ ಎಂಜಿನಿಯರ್, ಮೆಡಿಕಲ್ ಕಾಲೇಜುಗಳಿದ್ದು ಶಿಕ್ಷಣ ಕಾಶಿಯಾಗಿದೆ. ಆದರೆ ನೀರು ಹೋಗಲು ಸರಿಯಾದ ವ್ಯವಸ್ಥೆಯನ್ನು ಹೆದ್ದಾರಿ ಇಲಾಖೆಯವರು ಮಾಡದಿರುವುದರಿಂದ ಸಾವ೯ಜನಿಕರು ತೊಂದರೆಯನ್ನು ಅನುಭವಿಸುವಂತ್ತಾಗಿದೆ ಎಂದು ಸ್ಥಳೀಯರಾದ ತನ್ಸೀರ್ ತಿಳಿಸಿದ್ದಾರೆ.

