ಮೂಡುಬಿದಿರೆಯಲ್ಲಿ ಮಹಿಳೆಯರಿಗೆ ಸೀರೆ ಕುಚ್ಚು ಕೌಶಲ್ಯ ತರಬೇತಿ ಕಾಯ೯ಕ್ರಮ

ಮೂಡುಬಿದಿರೆಯಲ್ಲಿ ಮಹಿಳೆಯರಿಗೆ ಸೀರೆ ಕುಚ್ಚು ಕೌಶಲ್ಯ ತರಬೇತಿ ಕಾಯ೯ಕ್ರಮ


ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್, ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ ಮೂಡುಬಿದಿರೆ ಇವುಗಳ  ಜಂಟಿ ಆಶ್ರಯದಲ್ಲಿ 5 ದಿನಗಳ ಸೀರೆ ಕುಚ್ಚು ಕೌಶಲ್ಯ ತರಬೇತಿ ಕಾಯ೯ಕ್ರಮವನ್ನು  ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಮಂಗಳವಾರ ಉದ್ಘಾಟಿಸಲಾಯಿತು.

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಕ್ರೀಡಾ ನಿರ್ದೇಶಕರಾದ ಶಂಕರ್ ಕೋಟ್ಯಾನ್ ತರಬೇತಿ ಉದ್ಘಾಟಿಸಿ “ಹೊಲಿಗೆ ಕಲಿತ ಮಹಿಳೆಯರಿಗೆ ಸೀರೆ ಗೊಂಡೆ ಹಾಕುವ ಕೌಶಲ್ಯ ಕಲಿತು ಸ್ವ ಉದ್ಯೋಗ ಮಾಡಿದರೆ ಮಹಿಳೆಯರು ಹೆಚ್ಚು ಆರ್ಥಿಕವಾಗಿ ಸಬಲರಾಗಿ ತನ್ನ ಸಂಸಾರದ ಖರ್ಚು ವೆಚ್ಚ ಸರಿದೂಗಿಸಲು ಸಹಾಯವಾಗುತ್ತದೆ” ಎಂದರು.

ಭಾರತೀಯ ವಿಕಾಸ ಟ್ರಸ್ಟ್ ನ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಮಾತನಾಡಿ ತರಬೇತಿ ನಿಯಮಗಳ ಬಗ್ಗೆ ವಿವರಿಸಿ, ಕೌಶಲ್ಯ ತರಬೇತಿ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಶಕ್ತಿ ನೀಡುತ್ತದೆ. ಮಹಿಳೆಯರು ಸ್ವ ಉದ್ಯೋಗದ ಅವಕಾಶ ಬಂದಾಗ ಅದನ್ನು ಸದುಪಯೋಗಪಡಿಸಿಕೊಳ್ಳಲು ಕರೆ ನೀಡಿದರು.

ಯುವವಾಹಿನಿ (ರಿ.) ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸುಶಾಂತ್ ಕರ್ಕೇರ,  ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್, ಸಂಪನ್ಮೂಲ ವ್ಯಕ್ತಿ  ಶುಭಲಕ್ಷ್ಮೀ, ಘಟಕದ ಸಂಘಟನಾ ಕಾರ್ಯದರ್ಶಿ ಪ್ರಸಾದ್, ಅಮೂಲ್ಯ ಆರ್ಥಿಕ ಸಾಕ್ಷರತಾ ಸಮಾಲೋಚಕರಾದ ಲತೇಶ್ ಉಪಸ್ಥಿತರಿದ್ದರು.

ಸುಮಲತಾ ಸ್ವಾಗತಿಸಿದರು. ವೀಚೀಶ್ ಕೌಶಲ್ಯ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಜೆನಿಫರ್ ನಿರೂಪಿಸಿದರು. ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರದ ನಿರ್ದೇಶಕಿ  ಶುಭಲಕ್ಷ್ಮೀ ಧನ್ಯವಾದಗೈದರು.

ಮೂಡುಬಿದಿರೆ ವ್ಯಾಪ್ತಿಯ 35 ಮಹಿಳೆಯರು 5 ದಿನದ ತರಬೇತಿಯಲ್ಲಿ ಭಾಗವಹಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article