ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಸದಸ್ಯ ಪ್ರಶಾಂತ್ ನಾಯಕ್ ಕೈಬಿಡುವಂತೆ ಒತ್ತಾಯಿಸಿ ಹಿ.ಜಾ.ವೇ. ಮನವಿ
2026ರ ಜೂನ್ ತಿಂಗಳಲ್ಲಿ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರ ವಿರುದ್ಧ ದನವನ್ನು ಮೋಸದ ಮೂಲಕ ಪಡೆದುಕೊಂಡು ಹಿಂದಿರುಗಿಸದೆ ಅನ್ಯಧರ್ಮೀಯರಿಗೆ ಮಾರಾಟ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವುದ್ದು, ಇಂತಹ ಗಂಭೀರ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮುಂದುವರಿಸುವುದು ದೇವಸ್ಥಾನದ ಗೌರವ ಹಾಗೂ ಭಕ್ತರ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆಯ ಹಿನ್ನಲೆಯಲ್ಲಿ ಅವರನ್ನು ಸಮಿತಿಯಿಂದ ಕೈಬಿಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಯೋಜಕ ನರಸಿಂಹ ಮಾಣಿ, ಸಹ ಸಂಯೋಜಕ ಪುಷ್ಪರಾಜ್ ಕಮ್ಮಾಜೆ, ಕಾರ್ಯಕಾರಿಣಿ ಸದಸ್ಯರಾದ ಅನೂಪ್ ಮಯ್ಯ, ಹಿ.ಜಾ.ವೇ.ಯ ಬಂಟ್ವಾಳ ತಾಲೂಕು ಸಂಯೋಜಕರಾದ ಪ್ರಣೀತ್ ವಾಮದಪದವು, ಸಹ ಸಂಯೋಜಕ ದಿನೇಶ್ ಬಡೆಗೊಟ್ಟು, ದೂರುದಾರ ರವಿ ಶರ್ಬೆಟ್ಟು ಹಾಗೂ ಕಾರಿಂಜ ಕ್ಷೇತ್ರದ ಸದಸ್ಯರು ಉಪಸ್ಥಿತರಿದ್ದರು.
ಮನವಿಪತ್ರ ಸ್ವೀಕರಿಸಿದ ಅಧ್ಯಕ್ಷರು ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಹಿ.ಜಾ.ವೇ. ಬಂಟ್ವಾಳ ತಾಲೂಕು ಸಮಿತಿಯ ಪ್ರಕಟಣೆ ತಿಳಿಸಿದೆ.