ಖಾಸಗಿ ಬಸ್‌ಗಳ ಅವಂತಾರ: ನಾಲ್ವರ ಬಂಧನ

ಖಾಸಗಿ ಬಸ್‌ಗಳ ಅವಂತಾರ: ನಾಲ್ವರ ಬಂಧನ


ಕಾಪು: ಕಾಪು ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಎರಡು ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗಳು  ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದ ಪರಿಣಾಮ ಸರ್ವಿಸ್ ರಸ್ತೆಯಲ್ಲಿ ಸುಮಾರು 15 ನಿಮಿಷಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಉಂಟು ಮಾಡಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿ ಎರಡೂ ಬಸ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಬಂಧಿತರನ್ನು ಬಸ್ ಚಾಲಕರಾದ ರಮೇಶ್ ಮತ್ತು ಅಭಿಷೇಕ್ ಮತ್ತು ಕಂಡಕ್ಟರ್ಗಳಾದ ವಿಜಯಕುಮಾರ್ ಮತ್ತು ಹರೀಶ್ ಬಿ ಹೆಗ್ಡೆ ಎಂದು ಗುರುತಿಸಲಾಗಿದೆ.

ಕಾಪು ಬಸ್ ನಿಲ್ದಾಣದ ಬಳಿಯ ಸರ್ವಿಸ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬಸ್, ಪ್ರಯಾಣಿಕರನ್ನು ಹತ್ತಿಸಲು ಮತ್ತು ಬಿಡಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ಮತ್ತೊಂದು ಬಸ್ಸಿನ ಹಿಂಭಾಗದ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ. ಉದ್ಯಾವರದಿಂದಲೂ ಸಮಯ ಮತ್ತು ಓವರ್ಟೇಕ್ ಸಮಸ್ಯೆಗಳ ಕುರಿತು ಎರಡೂ ಬಸ್ಗಳ ಚಾಲಕರು ಮತ್ತು ನಿರ್ವಾಹಕರ ನಡುವೆ ಆರೋಪ- ಪ್ರತ್ಯಾರೋಪಗಳಿಂದ ಪರಿಸ್ಥಿತಿ ಉದ್ವಿಗ್ನತೆ ಗೆ ಕಾರಣವಾಗಿತ್ತು.

ಸಂದೇಶ್ ಟ್ರಾವೆಲ್ಸ್ ಬಸ್ ಕಾಪು ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಂದರ್ಭ ಹಿಂದಿನಿಂದ ಬಂದ ಆನಂದ್ ಟ್ರಾವೆಲ್ ಬಸ್ ಚಾಲಕ ನೇರವಾಗಿ ಬಸ್ಸಿನ ಬಲಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ಡಿಕ್ಕಿಯ ಪರಿಣಾಮವಾಗಿ ಎರಡೂ ಬಸ್‌ಗಳಲ್ಲಿದ್ದ ಪ್ರಯಾಣಿಕರು ನಡುಗಿದರು, ಬಸ್ನಲ್ಲಿದ್ದವರು ಭಯಭೀತರಾಗಿ ಬೊಬ್ಬೆ ಹೊಡೆದಿದ್ದಾರೆ. ಅದೃಷ್ಟವಶಾತ್, ಯಾವುದೇ ಗಂಭೀರ ಗಾಯಗಳಾಗಿಲ್ಲ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article