ಎಸ್.ಐ.ಆರ್ ಜಾಗೃತಿಗೆ ಬೈಕ್ ರ‍್ಯಾಲಿ

ಎಸ್.ಐ.ಆರ್ ಜಾಗೃತಿಗೆ ಬೈಕ್ ರ‍್ಯಾಲಿ


ಮಂಗಳೂರು: ಕೇಂದ್ರ ಚುನಾವಣಾ ಆಯೋಗ, ಜಿಲ್ಲಾಡಳಿತ, ಸ್ವೀಪ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ ಆಶ್ರಯದಲ್ಲಿ ವಿಶೇಷ ಜಾಗೃತಿ ಅಭಿಯಾನದ ಅಂಗವಾಗಿ ಶನಿವಾರ ಬೈಕ್ ರ‍್ಯಾಲಿ ನಡೆಯಿತು.

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು  ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರ್ಯಾಲಿ ಆಯೋಜಿಸಲಾಗಿದ್ದು, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಲಾಲ್‌ಬಾಗ್ ಮಂಗಳೂರು ಮಹಾನಗರಪಾಲಿಕೆ ಆವರಣದಿಂದ  ಪ್ರಾರಂಭಗೊಂಡ ಬೈಕ್ ರ್ಯಾಲಿ ಕದ್ರಿ ಉದ್ಯಾನವನದವರೆಗೆ ನಡೆಯಿತು.

ದಕ್ಷಿಣ  ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತಿತರರು ಇದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article