ವಿದ್ಯಾರ್ಥಿಗಳು ವಾಸ್ತವವನ್ನು ಅರಿಯಬೇಕು: ಚಂದ್ರಶೇಖರ ಬಿಳಿನೆಲೆ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಾಯಿ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ.ಫಾ. ಜಾನ್ ಬಾಪ್ಟಿಸ್ಟ್ ಸಲ್ದಾನ್ಹ ಮಾತನಾಡಿ, ಪದವಿ ಪೂರ್ವ ಶಿಕ್ಷಣದ ನಂತರ ನಮ್ಮದೇ ಸಂಸ್ಥೆಯಲ್ಲಿ ಉತ್ತಮ ಕೋರ್ಸ್ಗಳನ್ನೂ ಆರಂಭಿಸಿದ್ದು, ತಾವು ಇದರ ಪ್ರಯೋಜನವನ್ನು ಪಡೆಯಬಹುದು. ಇಂದಿನ ವಿದ್ಯಾರ್ಥಿಗಳಿಗೆ ಮುಖ್ಯವಾಗಿ ಬೇಕಾಗಿರುವುದು ನಮ್ಮ ನಡತೆ. ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿದ್ದು, ತಮ್ಮ ಉತ್ತಮ ನಡತೆಯ ಮೂಲಕವೇ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ವಿದ್ಯಾರ್ಥಿಗಳ ಬದುಕಿನಲ್ಲಿ ಬದಲಾವಣೆಯನ್ನು ತರಬಹುದು ಎಂದು ಹೇಳಿದರು.
2025-26ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ದಿವ್ಯಾ ಅನಿಲ್ ರೈ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. 2026-27ನೇ ಸಾಲಿನ ನೂತನ ಉಪಾಧ್ಯಕ್ಷರಾಗಿ ಡಾನ್ ಬಾಸ್ಕೋ ಕ್ಲಬ್ನ ಸದಸ್ಯರಾದ ಆಂಟೋನಿ ಒಲಿವೇರಾ ಇವರನ್ನು ಆಯ್ಕೆ ಮಾಡಲಾಯಿತು.
ಕಾಲೇಜಿನ ಪ್ರಾಂಶುಪಾಲ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಪ್ರಾಸ್ತಾವಿಕ ಮಾತನಾಡಿದರು.
ಪುತ್ತೂರು ಮಾಯಿ ದೆ ದೇವುಸ್ ಚರ್ಚ್ನ ಚರ್ಚ್ ಪಾಲನ ಸಮಿತಿಯ ಉಪಾಧ್ಯಕ್ಷ ರೋಶನ್ ಲಾಸ್ರಾದೊ ಹಾಗೂ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ದಿವ್ಯಾ ಅನಿಲ್ ರೈ, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ಅಶ್ವಿನಿ ಕೆ. ಸ್ವಾಗತಿಸಿ, 2025-26ನೇ ಸಾಲಿನ ಲೆಕ್ಕಪತ್ರವನ್ನು ಕೋಶಾಧಿಕಾರಿ ಸಂಜಯ್ ಎಸ್ ಮಂಡಿಸಿ, ವಂದಿಸಿದರು. ಉಷಾ ಎ ಕಾರ್ಯಕ್ರಮ ನಿರೂಪಿಸಿದರು.

