ಜಟ್ಟಿಪಳ್ಳ-ಕೊಡಿಯಾಲಬೈಲು ರಸ್ತೆ ಅಭಿವೃದ್ಧಿಗೆ ಸಚಿವ ಯು.ಟಿ. ಖಾದರ್ ಅವರಿಂದ ಗುದ್ದಲಿಪೂಜೆ
Monday, July 6, 2026
ಸುಳ್ಯ: ಜಟ್ಟಿಪಳ್ಳ-ಕೊಡಿಯಾಲಬೈಲು ರಸ್ತೆ ಅಭಿವೃದ್ಧಿಗೆ ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಂಜೂರಾದ 1 ಕೋಟಿ ಅನುದಾನದ ಕಾಮಗಾರಿಗೆ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಗುದ್ದಲಿ ಪೂಜೆ ನೆರವೇರಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್, ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ., ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಪ್ರಮುಖರಾದ, ಎಸ್.ಎನ್. ಮನ್ಮಥ, ಜಿ. ಕೃಷ್ಣಪ್ಪ, ಪಿ.ಸಿ. ಜಯರಾಮ, ಪಿ.ಎಸ್. ಗಂಗಾಧರ,
ನಿತ್ಯಾನಂದ ಮುಂಡೋಡಿ, ದಿನೇಶ್ ಮಡಪ್ಪಾಡಿ, ಎ.ವಿ. ತೀರ್ಥರಾಮ, ಚಂದ್ರಾ ಕೋಲ್ಚಾರ್, ಕೆ.ಎಂ. ಮುಸ್ತಫಾ, ಎಂ. ವೆಂಕಪ್ಪ ಗೌಡ, ಶಾಫಿ ಕುತ್ತಮೊಟ್ಟೆ, ಸರಸ್ವತಿ ಕಾಮತ್, ಗೀತಾ ಕೋಲ್ಚಾರ್, ಮಮತಾ ಕುದ್ಪಾಜೆ, ರಾಜು ಪಂಡಿತ್, ಸತ್ಯಕುಮಾರ್ ಆಡಿಂಜ, ಚಿತ್ರಾ ಕುಮಾರಿ, ದೊಡ್ಡಣ್ಣ ಬರೆಮೇಲು ಮತ್ತಿತರರು ಉಪಸ್ಥಿತರಿದ್ದರು.