ರಾಜ್ಯ ಮಟ್ಟಕ್ಕೆ ಆಯ್ಕೆ

ರಾಜ್ಯ ಮಟ್ಟಕ್ಕೆ ಆಯ್ಕೆ


ಬಂಟ್ವಾಳ: ಮಂಗಳೂರಿನ ಶಕ್ತಿ ವಿದ್ಯಾ ಕೇಂದ್ರದ ಈಜು ಕೊಳದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಸ್ಫರ್ಧೆ 14ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ವಿಧ್ಯಾರ್ಥಿನಿ ಅನನ್ಯ ಎ.ಆರ್. 200ಮೀ ಬಟರ್ಫ್ಲೈಯಲ್ಲಿ ಚಿನ್ನ, 50 ಮೀ ಮತ್ತು 100 ಮೀ ಬ್ಯಾಕ್ ಸ್ಟ್ರೋಕ್‌ನಲ್ಲಿ ಬೆಳ್ಳಿ ಪದಕ ಪಡೆದು ಆ.22 ರಂದು ಬೆಂಗಳೂರಿನ ಧಣಿಸಂದ್ರದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈಕೆ ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್‌ಎಕ್ಟರ್ ಬಿ.ಕೆ. ನಾಯ್ಕ್ ಅವರ ಶಿಷ್ಯೆಯಾಗಿದ್ದು, ಅಲೋಶಿಯಸ್ ಈಜು ಕೊಳದ ಮುಖ್ಯ ತರಬೇತುದಾರದ ಲೋಕರಾಜ್ ವಿಟ್ಲ, ತರಬೇತುದಾರರಾದ ಸಂಜಯ್ ಮತ್ತು ಗಗನ್ ರವರಿಂದ ತರಬೇತಿ ಪಡೆಯುತ್ತಿದ್ದಾರೆ. 

ಬರಿಮಾರ್ ಅಶೋಕ್ ಕುಮಾರ್ ಮತ್ತು ರೋಹಿಣಿ ಬಿ. ಅವರ ಪುತ್ರಿ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article