ಚಿನ್ನದ ಪದಕ: ರಾಜ್ಯ ಮಟ್ಟಕ್ಕೆ ಆಯ್ಕೆ

ಚಿನ್ನದ ಪದಕ: ರಾಜ್ಯ ಮಟ್ಟಕ್ಕೆ ಆಯ್ಕೆ


ಬಂಟ್ವಾಳ: ಮಂಗಳೂರಿನ ಶಕ್ತಿ ವಿದ್ಯಾ ಕೇಂದ್ರದ ಈಜು ಕೊಳದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಸ್ಫರ್ಧೆ 19ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಕಲ್ಲಡ್ಕ ಶ್ರೀರಾಮ ಪಿಯು ಕಾಲೇಜಿನ ವಿಧ್ಯಾರ್ಥಿನಿ ಅನರ್ಘ್ಯ ಎ.ಆರ್. 400 ಮೀ ಫ್ರೀಸ್ಟೈಲ್, 200 ಮೀ ಇಂಡಿಯುಜುವಲ್ ಮೆಡ್ಲೆ ಮತ್ತು 200 ಮೀ. ಬ್ಯಾಕ್ ಸ್ಟ್ರೋಕ್‌ನಲ್ಲಿ 3 ಚಿನ್ನದ ಪದಕಗಳನ್ನು ಪಡೆದು ಆ.22 ರಂದು ಬೆಂಗಳೂರಿನ ಧಣಿಸಂದ್ರದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್‌ಪೆಕ್ಟರ್ ಬಿ.ಕೆ. ನಾಯ್ಕ್ ಅವರ ಶಿಷ್ಯೆಯಾಗಿದ್ದು, ಅಲೋಶಿಯಸ್ ಈಜು ಕೊಳದ ಮುಖ್ಯ ತರಬೇತುದಾರದ ಲೋಕರಾಜ್ ವಿಟ್ಲ ಮತ್ತು ತರಬೇತುದಾರರಾದ ಸಂಜಯ್ ಮತ್ತು ಗಗನ್ ಅವರಿಂದ ತರಬೇತು ಪಡೆಯುತ್ತಿದ್ದಾರೆ. 

ಬರಿಮಾರು ಅಶೋಕ್ ಕುಮಾರ್ ಮತ್ತು ರೋಹಿಣಿ ಬಿ. ಅವರ ಪುತ್ರಿ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article