ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡೆಸಿ 5 ಲಕ್ಷ ಮೌಲ್ಯದ ಚಿನ್ನದ ಬಳೆ ದರೋಡೆ!

ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡೆಸಿ 5 ಲಕ್ಷ ಮೌಲ್ಯದ ಚಿನ್ನದ ಬಳೆ ದರೋಡೆ!

ಬೆಳ್ತಂಗಡಿ: ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯನ್ನು ಬೆದರಿಸಿ, ಅವರ ಕೈಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಳೆಗಳನ್ನು ಬಲವಂತವಾಗಿ ದೋಚಿ ಅಪರಿಚಿತ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆಘಾತಕಾರಿ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ನಡೆದಿದೆ.

ಉದ್ದದ ಗುಡ್ಡೆ ನಿವಾಸಿ ಅವ್ವಮ್ಮ (82) ದರೋಡೆಗೊಳಗಾದ ವೃದ್ಧೆ. ಆ.14 ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ನಡುವಿನ ಅವಧಿಯಲ್ಲಿ ಅವ್ವಮ್ಮ ಅವರು ಮನೆಯಲ್ಲಿ ಒಬ್ಬರೇ ಇದ್ದ ಸಮಯವನ್ನು ಸಾಧಿಸಿದ ಅಪರಿಚಿತ ವ್ಯಕ್ತಿ ಅಕ್ರಮವಾಗಿ ಮನೆಯೊಳಗೆ ಪ್ರವೇಶಿಸಿದ್ದಾನೆ.

ಬಳಿಕ ವೃದ್ಧೆಯ ಎರಡೂ ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ, ಅಂದಾಜು ೫ ಲಕ್ಷ ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದಾನೆ. ಕಳ್ಳತನ ಮಾಡುವ ರಭಸದಲ್ಲಿ ಬಳೆಗಳನ್ನು ಎಳೆದಿದ್ದರಿಂದ ವೃದ್ಧೆಯ ಎಡಕೈಗೆ ತೀವ್ರ ರಕ್ತಗಾಯವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಅವ್ವಮ್ಮ ಅವರ ಪುತ್ರ ಸಾದಿಕ್ (45) ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕಲಂ 309(6) BNS-2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಪತ್ತೆಗೆ ಪೊಲೀಸರು ಜಾಲ ಬೀಸಿದ್ದು, ತನಿಖೆ ಮುಂದುವರಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article