ವಿದ್ಯೆ ಅಜ್ಞಾನ ಹೋಗಲಾಡಿಸುವ ಉನ್ನತ ಶಕ್ತಿ: ಡಾ. ದಿವಾಕರ್ ಭಟ್
ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಆಂತರಿಕ ಗುಣಮಟ್ಟ ಖಾತ್ರಿಕೋಶದ ವತಿಯಿಂದ ಗ್ರಂಥಾಲಯ ಪಿತಾಮಹ ಡಾ. ಎಸ್. ಆರ್. ರಂಗನಾಥನ್ ಅವರ 134ನೇ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.
ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ಅವುಗಳ ಜ್ಞಾನದ ಪ್ರಯೋಜನ ಪಡೆದುಕೊಳ್ಳಬೇಕು. ಹಿಂದಿನ ಕಾಲದಲ್ಲಿ ಗ್ರಂಥಾಲಯಗಳನ್ನು ಹುಡುಕಿಕೊಂಡು ಹೋಗುವ ಪರಿಸ್ಥಿತಿ ಇತ್ತು. ಆದರೆ, ಇಂದು ತಾಂತ್ರಿಕ ಬೆಳವಣಿಗೆಯ ಕಾರಣದಿಂದಾಗಿ ಡಿಜಿಟಲ್ ಗ್ರಂಥಾಲಯ ಎಲ್ಲೆಡೆಯೂ ಲಭ್ಯವಿದೆ. ಅದನ್ನು ಸೂಕ್ತವಾಗಿ ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೊ. ಜಯವಂತ ನಾಯಕ್, ಜ್ಞಾನ ಪಡೆಯುವುದಕ್ಕಾಗಿಯೇ ಗ್ರಂಥಾಲಯಗಳಿರುತ್ತವೆ. ವಿದ್ಯಾರ್ಥಿಗಳು ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳುವುದು ಇಂದಿನ ಅಗತ್ಯಗಳಲ್ಲಿ ಒಂದಾಗಿದೆ. ಹಾಗಾಗಿ ಆ ನಿಟ್ಟಿನಲ್ಲಿ ಹೆಚ್ಚು ಗಮನ ನೀಡುವಂತೆ ಸಲಹೆ ನೀಡಿದರು.
ಗ್ರಂಥಪಾಲಕಿ ಡಾ. ವನಜಾ ಸ್ವಾಗತಿಸಿ ಪ್ರಾಸ್ಥಾವಿಕವಾಗಿ ಮಾತನಾಡಿದರು. ಇದೇ ವೇಳೆ ಐಕ್ಯುಎಸಿ ಸಂಯೋಜಕಡಾ. ಸಿದ್ದರಾಜು ಎಂ.ಎನ್., ಪೂರ್ವತನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಸೇರಿದಂತೆ ನಾನಾ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.