ದುಶ್ಚಟಗಳ ನಿರ್ಮೂಲನೆಗೆ ಮಹಾಂತ ಶಿವಯೋಗಿಗಳ ಸೇವೆ ಅವಿಸ್ಮರಣೀಯ: ಅನಿಲ್ ಕುಮಾರ್ ಭೂಮಾರೆಡ್ಡಿ
ವಿದ್ಯಾರ್ಥಿಗಳು ಮಾದಕ ದ್ರವ್ಯ ಮಾರಾಟ ಅಥವಾ ಸೇವಿಸುವವರ ಬಗ್ಗೆ ಮಾಹಿತಿಯನ್ನು ಪೋಲಿಸರಿಗೆ ಅಥವಾ ಶಾಲಾ ಕಾಲೇಜಿನ ಆವರಣದಲ್ಲಿ ಅಳವಡಿಸಿದ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮೂಲಕ ಗೌಪ್ಯವಾಗಿ ನೀಡಬೇಕು. ಮಾದಕ ವ್ಯಸನಗಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು. ಇಂದಿನ ಯುವಪೀಳಿಗೆ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಬೆಂಬಲ ನೀಡಿದರೆ ಮಹಾಂತ ಶಿವಯೋಗಿಗಳಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಅವರು ಹೇಳಿದರು.
ಉಪನ್ಯಾಸ ನೀಡಿದ ಆಪ್ತಸಮಾಲೋಚಕ ರಫೀಕ್ ಮಾಸ್ಟರ್, ಮಾದಕ ವ್ಯಸನ ಎಂಬ ಚಟವು ವ್ಯಸನಕ್ಕೊಳಗಾದ ವ್ಯಕ್ತಿಯನ್ನು ಬಾಧಿಸುವುದು ಮಾತ್ರವಲ್ಲದೆ ಅವರ ತಂದೆ ತಾಯಿಯು ನರಕಯಾತನೆ ಪಡುವಂತೆ ಮಾಡುತ್ತದೆ. ಪೋಷಕರ ಸಾಮಾಜಿಕ ಗೌರವಕ್ಕೆ ಧಕ್ಕೆ ಉಂಟುಮಾಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಕೆಟ್ಟ ಚಟಗಳ ಕಡೆಗೆ ಗಮನ ಹರಿಸದೆ ಓದಿನ ಕಡೆಗೆ ಗಮನ ಹರಿಸಬೇಕು. ಯುವಜನರು ಸನ್ಮಾರ್ಗದಲ್ಲಿ ನಡೆದರೆ ಹೆತ್ತವರಿಗೆ ನೆಮ್ಮದಿ ಸಿಗಲು ಸಾಧ್ಯ ಹಾಗೂ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದು ವಿವರಿಸಿದರು.
ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ ಉಳೆಪಾಡಿ, ಮನೋಶಾಸ್ತ್ರಜ್ಞ ಡಾ.ಸಾತ್ವಿಕ್, ಶಾಲಾ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಪ್ರಕಾಶ್ ಮತ್ತಿತರರು ಇದ್ದರು.
ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ ಸ್ವಾಗತಿಸಿದರು. ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕಿ ವೀಣಾ ನಿರೂಪಿಸಿ, ಉಪನ್ಯಾಸಕಿ ಪೂಜಾ ವಂದಿಸಿದರು.

