ಇತಿಹಾಸ ಹೇಳದ ಅದೆಷ್ಟೋ ವಿಷಯಗಳಿಗೆ ವೇದಿಕೆಯಾದ ಕೃತಿ: ಪ್ರೊ. ವಿಜಯ ಪೂಣಚ್ಚ ತಂಬಂಡ
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಜ್ಯೋತಿ ಚೇಳ್ಯಾರು ಅವರು ದಿಟ್ಟ ಹೆಜ್ಜೆಯ ಗಟ್ಟಿಗಿತ್ತಿಯರು ಎಂಬ ವಿಷಯದ ಕುರಿತು ವಿಚಾರ ಮಂಡಿಸಿದರೆ, ವಿಶ್ವವಿದ್ಯಾನಿಲಯ ಕಾಲೇಜಿನ ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊ. ಗಣಪತಿ ಗೌಡ ಎಸ್. ಅವರು ವಸಾಹತುಶಾಹಿ ಪ್ರಭುತ್ವ ಮತ್ತು ಪ್ರತಿರೋಧ ವಿಷಯದ ಕುರಿತು ಮಾತನಾಡಿದರು.
ಕೃತಿಯ ಲೇಖಕಿ ಡಾ. ರಾಜಲಕ್ಷ್ಮಿ ಎನ್. ಕೆ., ಅಂಡಮಾನ್ ಕೇವಲ ಇತಿಹಾಸ, ರಕ್ತದ ಕಲೆ ಇರುವ ನೆಲವಲ್ಲ, ಬದಲಾಗಿ ಅಲ್ಲಿನ ಜನರ ಆರ್ತಧ್ವನಿಯನ್ನು ಹುಡುಕುವ ಪ್ರಯತ್ನ ಮಾಡಲಾಗಿದೆ. ಕೇವಲ ಪಠ್ಯ ಪುಸ್ತಕದ ವಿಷಯವಷ್ಟೇ ಇತಿಹಾಸವಾಗಲು ಸಾಧ್ಯವಿಲ್ಲ. ಅದರಾಚೆಗೆ ಇರುವ ಬದುಕಿನ ತಲ್ಲಣಗಳನ್ನು, ಭರವಸೆಯನ್ನು ದಾಖಲಿಸಲು ಪ್ರೇರೇಪಣೆ ನೀಡಿತು. ಹಿಂದಿ ಭಾಷೆಯಲ್ಲಿ ಶಕುಂತಲಾ ಶಿವರಾಂ ಅವರು ಬರೆದ ಕೃತಿಯನ್ನು ಈಗಾಗಲೇ ಇಂಗ್ಲಿಷ್ ಭಾಷೆಗೆ ಅನುವಾದ ಮಾಡಲಾಗಿದೆ ಎಂದು ಪ್ರಾಸ್ತಾವಿಕವಾಗಿ ಹೇಳಿದರು.
ಮಹಿಳೆಯದು ವ್ಯವಸ್ಥೆಯ ಭಾಗವಾಗಿದ್ದರೂ ಅವರ ಪಾತ್ರ ಎಂದಿಗೂ ಗೌಣವಾಗಿರುವ ಅವರ ದೃಷ್ಟಿಕೋನದಲ್ಲಿ ಹಾಗೂ ದೇಶ ನಿರ್ಮಾಣ ಮಾಡುವ ಗುರುತರವಾದ ಜವಾಬ್ದಾರಿಯ ಹಿನ್ನಲೆಯಲ್ಲಿ ಈ ಕೃತಿ ಸಹಾಯ ಮಾಡಲಿ ಎಂಬ ಆಶಯದೊಂದಿಗೆ ರಚನೆ ಮಾಡಲಾಗಿದೆ ಎಂದು ವಿವರಿಸಿದರು.
ಕರಾವಳಿ ಲೇಖಕಿಯರು-ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಲಾ ಟಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರೆ, ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಅತಿಥಿಗಳಾಗಿ ಉಪಸ್ಥಿತರಿದ್ದರು. ಇದೇ ವೇಳೆ ಅನೇಕಾಂತ ಫೌಂಡೇಶನ್ ಟ್ರಸ್ಟ್ನ ಡಾ. ಉದಯ ಕುಮಾರ್ ಇರ್ವತ್ತೂರು ಕಾರ್ಯಕ್ರಮ ನಿರೂಪಿಸಿದರು.
ಇದೇ ವೇಳೆ, ಕರಾವಳಿ ಲೇಖಕಿಯರು-ವಾಚಕಿಯರ ಸಂಘದ ಪದಾಧಿಕಾರಿಗಳು ಸೇರಿದಂತೆ ನಾನಾ ಗಣ್ಯರು ಭಾಗವಹಿಸಿದ್ದರು.


