ಸ್ವಾತಂತ್ರ್ಯ ದಿನಾಚರಣೆ: ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕ
Sunday, August 16, 2026
ಮಂಗಳೂರು: ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ವತಿಯಿಂದ ಸಂಸ್ಥೆಯ ಶತಮಾನೋತ್ಸವ ಕಟ್ಟಡದ ಮುಂಭಾಗದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಿವೃತ್ತ ಯೋಧ ಸುಬೇದಾರ್ ಶಶಾಂಕ ನಾಯಕ್.ಎಸ್. ಧ್ವಜಾರೋಹಣ ನೆರವೇರಿಸಿದರು.
ರೆಡ್ ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ, ಉಪಾಧ್ಯಕ್ಷ ಡಾ.ಸಚ್ಚಿದಾನಂದ ರೈ, ಖಜಾಂಜಿ ಗುರುದತ್ ನಾಯಕ್, ಕಾರ್ಯದರ್ಶಿ ಡಾ.ಸತೀಶ್ ಕುಮಾರ್ ಶೆಟ್ಟಿ, ನಿರ್ದೇಶಕರಾದ ಡಾ.ಸತೀಶ್ ರಾವ್, ಪಿ.ಬಿ.ಹರೀಶ್ ರೈ, ಡಾ.ಸುಮನ.ಬಿ., ರಾಘವೇಂದ್ರ ರಾವ್, ನಿವೃತ್ತ ಎಡಿಸಿ ಪ್ರಭಾಕರ ಶರ್ಮ, ನಿವೃತ್ತ ಎಸ್ಐ ನಾರಾಯಣ, ವಿಜಯ ಬ್ಯಾಂಕ್ನ ನಿವೃತ್ತ ಎಜಿಎಂ ಕಿಶೋರ್ಚಂದ್ರ ಹೆಗ್ಡೆ, ವಕೀಲ ಜಿನೇಂದ್ರಕುಮಾರ್, ಮಿತ್ರಾ ಶಶಾಂಕ ನಾಯಕ್ ಹಾಗೂ ಯೂತ್ ರೆಡ್ಕ್ರಾಸ್ ಸ್ವಯಂ ಸೇವಕರು ಉಪಸ್ಥಿತರಿದ್ದರು.