ವಿದ್ಯಾರ್ಥಿಗಳ ಬದುಕಿಗೆ ಮೌಲ್ಯಗಳೇ ಮೈಲುಗಲ್ಲು: ವಿವೇಕ ಆಳ್ವ
ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನಲ್ಲಿ ಎನ್ಸಿಸಿ, ಎನ್ಎಸ್ಎಸ್, ರೆಡ್ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್, ಸಾಹಿತ್ಯ ಸಂಘ ಹಾಗೂ ಇಕೋಕ್ಲಬ್ಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಗುರು-ಹಿರಿಯರ ಮೇಲಿನ ಗೌರವ ಮತ್ತು ತ್ಯಾಗವನ್ನು ಸದಾ ಸ್ಮರಿಸಬೇಕೆಂದ ಅವರು, "ಸೋಲು ಸಾವಲ್ಲ; ಸೋಲಿನ ಬಳಿಕವೂ ಎದ್ದು ನಿಲ್ಲದಿರುವುದೇ ನಿಜವಾದ ಸೋಲು" ಎಂಬ ಸಕಾರಾತ್ಮಕ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕೆಂದು ಆಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಮಾತನಾಡಿ, "ಅಂಕಗಳು ಮತ್ತು ಪ್ರಮಾಣಪತ್ರಗಳು ನಿಮ್ಮ ಸಾಮರ್ಥ್ಯವನ್ನು ಅಳೆಯಬಹುದೇ ಹೊರತು ನಿಮ್ಮ ವ್ಯಕ್ತಿತ್ವ ಹಾಗೂ ಮಾನವೀಯ ಮೌಲ್ಯಗಳನ್ನಲ್ಲ. ಮನುಷ್ಯನನ್ನು ನಿಜವಾಗಿ ರೂಪಿಸುವ ಶಿಕ್ಷಣವು ತರಗತಿಯ ಹೊರಗಿನ ಇಂತಹ ಚಟುವಟಿಕೆಗಳಿಂದ ಆರಂಭವಾಗುತ್ತದೆ," ಎಂದರು.
ಎನ್ಎಸ್ಎಸ್ ನಮಗೆ ಸೇವೆ ಕಲಿಸಲಿ. ರೆಡ್ಕ್ರಾಸ್ ನಮ್ಮೊಳಗೆ ಮಾನವೀಯತೆ ಬೆಳೆಸಲಿ. ರೋವರ್ಸ್ ಮತ್ತು ರೇಂಜರ್ಸ್ ಸಾಹಸ ಹಾಗೂ ನಾಯಕತ್ವ ನೀಡಲಿ. ಸಾಹಿತ್ಯ ಸಂಘ ಚಿಂತನೆ ಮತ್ತು ಸಂವೇದನೆ ಮೂಡಿಸಲಿ. ಇಕೋ ಕ್ಲಬ್ ಪ್ರಕೃತಿಯೊಂದಿಗೆ ನಮ್ಮ ಸಂಬಂಧವನ್ನು ಪುನಃ ನೆನಪಿಸಲಿ” ಎಂದರು.
ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಉಪಸ್ಥಿತರಿದ್ದರು. ವಿವಿಧ ಘಟಕಗಳ ಕನ್ವೀನರ್ಗಳಾದ ಲೆಫ್ಟಿನೆಂಟ್ ಮಹೇಂದ್ರಜೈನ್, ಪ್ರಶಾಂತ್ ಶೆಟ್ಟಿ, ಪ್ರದೀಪ್ ಕೆ.ಪಿ., ಸಂಧ್ಯಾಕುಮಾರಿ, ಡಾ. ವಾದಿರಾಜ ಕಲ್ಲೂರಾಯ, ಅಶೋಕ್ ಶೆಟ್ಟಿ ಹಾಗೂ ಅಶೋಕ ಎನ್ ಮತ್ತು ವಿದ್ಯಾರ್ಥಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಾಂಶುಪಾಲ ಪುಷ್ಪರಾಜ ಬಿ. ಸ್ವಾಗತಿಸಿದರು. ಉಪಪ್ರಾಂಶುಪಾಲ ಸುನಾದ್ ರಾಜ್ ಜೈನ್ ವಂದಿಸಿ, ಉಪನ್ಯಾಸಕಿ ವ್ಯಾಲೆಂಟಿನ ಮಿರಾಂಡಾ ಕಾರ್ಯಕ್ರಮ ನಿರೂಪಿಸಿದರು.
