ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಸಂಘಗಳ ಚಟುವಟಿಕೆಗಳಿಗೆ ಚಾಲನೆ
ಅವರು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಲಾ ಸಂಘ, ಸಾಹಿತ್ಯ ಸಂಘ, ಮತದಾರರ ಸಾಕ್ಷರತಾ ಸಂಘ ಹಾಗೂ ರೋವರ್ಸ್-ರೇಂಜರ್ಸ್ ಘಟಕಗಳ ಈ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಅವರು, ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜ್ಞಾನದೊಂದಿಗೆ ಜೀವನ ಮೌಲ್ಯಗಳ ಅರಿವು ಸಹ ಅಷ್ಟೇ ಅಗತ್ಯ ಎಂದು ತಿಳಿಸಿದರು. ಓದುವ ಹವ್ಯಾಸವು ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಕಲ್ಪನಾ ಶಕ್ತಿ ಮತ್ತು ಸೃಜನಶೀಲತೆಗೆ ಹೊಸ ದಿಕ್ಕು ನೀಡುತ್ತದೆ. ಬದುಕಿನಲ್ಲಿ ಕೇವಲ ಅಂಕಗಳಿಕೆಯೇ ಯಶಸ್ಸಿನ ಮಾನದಂಡವಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನಲ್ಲಿರುವ ಪ್ರತಿಭೆ, ಆಸಕ್ತಿ ಹಾಗೂ ಸೃಜನಶೀಲತೆಯನ್ನು ಗುರುತಿಸಿ ಬೆಳೆಸಿಕೊಳ್ಳುವ ಮೂಲಕ ಸಮಾಜಕ್ಕೆ ಉಪಯುಕ್ತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್. ಅಧ್ಯಕ್ಷತೆ ವಹಿಸಿದ್ದರು.
ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ., ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ, ವಿವಿಧ ಸಂಘಗಳ ಸಂಯೋಜಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಪ್ತಮಿ ಸ್ವಾಗತಿಸಿದರು, ಮಧು ಅತಿಥಿಯನ್ನು ಪರಿಚಯಿಸಿದರು. ಲಿಖಿತ ಕಾರ್ಯಕ್ರಮ ನಿರೂಪಿಸಿ, ಶ್ರವಣ್ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.