ಪೊಲೀಸ್ ಸಿಬ್ಬಂದಿ ಶಾಂತಪ್ಪ ಕೇಸಿಗೆ ತಡೆಯಾಜ್ಞೆ ನೀಡಿದ ಉಚ್ಛ ನ್ಯಾಯಾಲಯ

ಪೊಲೀಸ್ ಸಿಬ್ಬಂದಿ ಶಾಂತಪ್ಪ ಕೇಸಿಗೆ ತಡೆಯಾಜ್ಞೆ ನೀಡಿದ ಉಚ್ಛ ನ್ಯಾಯಾಲಯ

ಮೂಡುಬಿದಿರೆ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಯಾಗಿದ್ದ ಶಾಂತಪ್ಪ ಅವರ ವಿರುದ್ಧದ ಕೇಸಿಗೆ ರಾಜ್ಯ ಉಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.

ದೂರು ನೀಡಲು ಠಾಣೆಗೆ ಬಂದಿದ್ದ ಮಹಿಳೆಯೋರ್ವರು ತಮ್ಮ ದೂರು ಅರ್ಜಿಯಲ್ಲಿ ನೀಡಿದ್ದ ಮೊಬೈಲ್ ಸಂಖ್ಯೆಯನ್ನು ಪಡೆದು ಆ ನಂಬರ್ ಗೆ ಕರೆಮಾಡಿ ಅಸಭ್ಯ ಮತ್ತು ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡಿರುವ ಬಗ್ಗೆ  ಮೂಡುಬಿದಿರೆ ಠಾಣೆಗೆ ಮಹಿಳೆ ದೂರು ನೀಡಿದ್ದು  ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಲ್ಲದೆ ಶಾಂತಪ್ಪ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿತ್ತು.

ಈ ದೂರಿನ ಕುರಿತಾಗಿ ಶಾಂತಪ್ಪ ಅವರು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ಹೈಕೋರ್ಟ್ ಈ ಕೇಸ್ ಗೆ ತಡೆಯಾಜ್ಞೆ ನೀಡಿದೆ.

ಶಾಂತಪ್ಪ ಪರವಾಗಿ ಮೂಡುಬಿದಿರೆಯ ನ್ಯಾಯವಾದಿ ಮರ್ವಿನ್ ಜಾನ್ಸನ್ ಲೋಬೋ ಅವರು ವಾದಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article