ತುಳುಭಾಷೆ, ಆಚಾರ-ವಿಚಾರ ಜೀವನ ಶೈಲಿಯ ಮಹತ್ವ ಮಕ್ಕಳಿಗೆ ತಿಳಿಸಿ: ಡಾ. ಎಂ. ಮೋಹನ ಆಳ್ವ

ತುಳುಭಾಷೆ, ಆಚಾರ-ವಿಚಾರ ಜೀವನ ಶೈಲಿಯ ಮಹತ್ವ ಮಕ್ಕಳಿಗೆ ತಿಳಿಸಿ: ಡಾ. ಎಂ. ಮೋಹನ ಆಳ್ವ


ಮೂಡುಬಿದಿರೆ: ಅಲಂಕಾರ, ಸಾಂಪ್ರದಾಯಿಕ ಉಡುಪು ಮತ್ತು ಆಚರಣೆಗೆ ‘ಆಟಿಡೊಂಜಿ ದಿನ ’ ಸೀಮಿತವಾಗದೆ ಹಿಂದಿನ ಕಾಲದ ಕಷ್ಟ-ನೋವುಗಳು, ತುಳು ಭಾಷೆ, ಆಚಾರ-ವಿಚಾರ, ಆಹಾರ ಪದ್ಧತಿ ಹಾಗೂ ಜೀವನಶೈಲಿಯ ಮಹತ್ವವನ್ನು ಮಕ್ಕಳಿಗೆ ತಿಳಿಸುವ ಉದ್ದೇಶವನ್ನು ಹೊಂದಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ. ಎಂ. ಮೋಹನ್ ಆಳ್ವ ಹೇಳಿದರು.

ಅವರು ಬಂಟರ ಸಂಘ ಮೂಡುಬಿದಿರೆ ಇದರ ಬಂಟರ ಮಹಿಳಾ ಘಟಕದ ಆಶ್ರಯದಲ್ಲಿ ಭಾನುವಾರ ಆಳ್ವಾಸ್ ಕ್ಯಾಂಪಸ್‌ನ ಮೋಹಿನಿ ಅಪ್ಪಾಜಿ ನಾಯಕ್ ವೇದಿಕೆಯಲ್ಲಿ ನಡೆದ 4ನೇ ವರ್ಷದ ‘ಆಟಿಡೊಂಜಿ  ದಿನ 2026’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಂಟ ಸಮಾಜದಲ್ಲಿ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಒಂದೇ ಮನಸ್ಸಿನಿಂದ ಸಂಘಟಿತರಾಗಿ ಸಮಾಜವನ್ನು ಮುನ್ನಡೆಸುವುದು ಎಲ್ಲರ ಕರ್ತವ್ಯ. ಹಿರಿಯರು ಕಟ್ಟಿಕೊಟ್ಟ ಪರಂಪರೆ, ಸಂಸ್ಕೃತಿ ಹಾಗೂ ಘನತೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಬೇಕು ಎಂದು ಹೇಳಿದ ಅವರು ಸಮಾಜದ ಬಡ ಹಾಗೂ ಅಗತ್ಯವಿರುವ ಕುಟುಂಬಗಳನ್ನು ಗುರುತಿಸಿ ಮಕ್ಕಳ ಶಿಕ್ಷಣಕ್ಕೆ ನೆರವಾಗಬೇಕು. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನೆರವು ನೀಡುವುದು ಪ್ರಮುಖ ಉದ್ದೇಶವಾಗಿದ್ದು, ಇಂತಹ ಕಾರ್ಯಗಳಿಗೆ ಆಳ್ವಾಸ್ ಸಂಸ್ಥೆಯ ಸಹಕಾರ ಸದಾ ಇರಲಿದೆ. ಸಾಮಾನ್ಯ ಜನರಿಗೆ ಆರೋಗ್ಯ ಸೇವೆ ತಲುಪಿಸುವ ನಿಟ್ಟಿನಲ್ಲಿ ವೈದ್ಯಕೀಯ ಕಾಲೇಜಿನ ಮೂಲಕವೂ ಕಾರ್ಯ ನಡೆಯುತ್ತಿದೆ ಎಂದರು.

ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. 

75 ವರ್ಷ ಪೂರೈಸುತ್ತಿರುವ ಡಾ. ಎಂ. ಮೋಹನ ಆಳ್ವ, ಧಾರ್ಮಿಕ, ಸಾಮಾಜಿಕ ಮುಖಂಡ ಬಿ. ಜಯರಾಜ್ ಹೆಗ್ಡೆ ಹಾಗೂ ಮಂಗಳೂರು ಬಂಟರ ಸಂಘದ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಶೋಭಾ ಎಸ್. ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. 

2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಎಂಬಿಬಿಎಸ್ ಪೂರ್ಣಗೊಳಿಸಿದ ಭುವನ್ ವೈಷ್ಣವ್ ಮಾರ್ಲ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ. ಮಲ್ಲಿಕಾ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯೆ ವಿಜಯಲಕ್ಷ್ಮೀ ಪ್ರಸಾದ್ ರೈ ಆಷಾಢದ ನುಡಿ ನೀಡಿದರು.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮೂಡುಬಿದಿರೆ ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಸಮಾಜಸೇವಕ ಪ್ರಸಾದ್ ರೈ ಕಲ್ಲಿಮಾರ್, ಬಂಟರ ಯಾನೆ ನಾಡವರ ಮಾತೃಸಂಘದ ಮಂಗಳೂರು ತಾಲೂಕು ಸಮಿತಿ ಸಂಚಾಲಕ ದಿವಾಕರ ಸಾಮಾನಿ, ಬಂಟರ ಸಂಘ ಮೂಡುಬಿದಿರೆಯ ಕಾರ್ಯದರ್ಶಿ ಸುಚರಿತ ಶೆಟ್ಟಿ, ಕೋಶಾಧಿಕಾರಿ ಪುರುಷೋತ್ತಮ್ ಶೆಟ್ಟಿ, ಯುವ ಬಂಟರ ಘಟಕದ ಅಧ್ಯಕ್ಷ ಸಂದೀಪ್ ಶೆಟ್ಟಿ ಭಾಗವಹಿಸಿದರು. ಮಹಿಳಾ ಘಟಕದ ಕಾರ್ಯದರ್ಶಿ ಸಂಗೀತಾ ಶೆಟ್ಟಿ, ಕೋಶಾಧಿಕಾರಿ ಗೀತಾ ಪಿ. ಶೆಟ್ಟಿ, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ರೋಹಿಣಿ ಶೆಟ್ಟಿ ವರದಿ ವಾಚಿಸಿದರು. ಶಿವಪ್ರಸಾದ್ ಹೆಗ್ಡೆ ಸನ್ಮಾನ ಪತ್ರ ವಾಚಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಫಲಾನುಭವಿ ನಿಶಾ ಡಿ. ಶೆಟ್ಟಿ ಅನಿಸಿಕೆ ವ್ಯಕ್ತಪಡಿಸಿದರು. ರಂಜಿತಾ ಎ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article