ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ‘ಪುರಲ್ದ ಕುರಲ್’

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ‘ಪುರಲ್ದ ಕುರಲ್’


ಪೊಳಲಿ: ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ತೆನೆ ಹಬ್ಬ(ಹೊಸ ಅಕ್ಕಿ ಊಟ)ಪುದ್ದರ್ ಆಚರಣೆಯು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.


ಇಲ್ಲಿನ ಅಖಿಲೇಶ್ವರ ದೇವಸ್ಥಾನದ ಪಕ್ಕದ ಭಾಸ್ಕರ ಸಪಲಿಗ ಅವರ ಗದ್ದೆಯಲ್ಲಿ ಭತ್ತವನ್ನು ನಾಟಿ ಮಾಡಿ ಬಳಿಕ ಪೊಳಲಿಯ ಪುದ್ದರ್ ಹೊಸ ಅಕ್ಕಿ ಊಟಕ್ಕೆ ತಯಾರು ಮಾಡಲಾಗುತ್ತದೆ. ಇದಕ್ಕೆ ‘ಪುರಲ್ದ ಕುರಲ್’ ಎಂದೇ ಪ್ರತೀತಿ ಇದ್ದು ದೇವಸ್ಥಾನದ ಹೋರಾಂಗಣದಲ್ಲಿ ಇದ್ದ ತೆನೆಯನ್ನು ದೇವಳದ ಧ್ವಜಸ್ತಂಬದ ಮುಂಭಾಗದಲ್ಲಿ ತಂದಿರಿಸಲಾಗುತ್ತಿದೆ.

ಬಳಿಕ ದೇವಳದ ಅರ್ಚಕರ ನೇತೃತ್ವದಲ್ಲಿ ಪ್ರಾರ್ಥನೆಗೈದು ತೆನೆಯನ್ನು ವಾದ್ಯಗೋಷ್ಠಿಯೊಂದಿಗೆ ದೇವಾಲಯದ ಒಳಗೆ ತಂದು ಶ್ರೀ ರಾಜರಾಜೇಶ್ವರಿ ದೇವಿಯ ಮುಂದಿಟ್ಟು ವಿಶೇಷ ಪೂಜೆಗಳು ನಡೆಯುತ್ತದೆ.

ಶ್ರೀ ಕ್ಷೇತ್ರಕ್ಕೆ ಸಂಭಂದಪಟ್ಟ ಸಾವಿರ ಸೀಮೆಯ ಭಗವದ್ಬಕ್ತರು, ತೆನೆ ಹಬ್ಬದಲ್ಲಿ ಪಾಲ್ಗೊಂಡು ದೇವರ ಪ್ರಸಾದವೆಂಬಂತೆ ತೆನೆಗಳನ್ನು ಅಲ್ಲದೇ ದೇವರಿಗೆ ಮಾಡಿದ ನೈವೇದ್ಯವನ್ನು ತಮ್ಮ ಮನೆಗೆ ಕೊಂಡೊಯ್ದು ಮನೆಯಲ್ಲಿ ಪುದ್ದರ್ ಆಚರಣೆ ಮಾಡಲಾಗುತ್ತದೆ.

ಪ್ರತಿ ವರ್ಷವು ಸಂಪ್ರದಾಯ ಪ್ರಕಾರವಾಗಿ ಶ್ರೀ ಕ್ಷೇತ್ರದಲ್ಲಿ ತೆನೆಹಬ್ಬ (ಕುರಲ್ ಪರ್ಬ) ಆಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಕ್ಷೇತ್ರದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ್ ತಂತ್ರಿ, ಪ್ರಧಾನ ಅನುವಂಶಿಕ ಮೊಕ್ತೇಸರ ಮಾಧವ ಭಟ್ ಪೊಳಲಿ, ಆಡಳಿತ ಮೊಕ್ತೇಸರರಾದ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ದೇವಾಲಯದ ಪ್ರಧಾನ ಅರ್ಚಕರಾದ ರಾಮ್ ಭಟ್, ಪರಮೇಶ್ವರ ಭಟ್, ಅನಂತ ಭಟ್, ಪದ್ಮನಾಭ ಭಟ್ ಕಾರ್ಯನಿರ್ವಹಣಾಧಿಕಾರಿ ಚಂದ್ರಮೋಹನ್ ಹಾಗೂ ಕ್ಷೇತ್ರದ ಭಕ್ತಾಧಿಗಳು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article