ಸಂತ ಫಿಲೋಮಿನಾ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳಿಗೆ ಚಾಲನೆ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳಿಗೆ ಚಾಲನೆ

ತರಗತಿಯಾಚೆ: ನವೀನತೆ ಮತ್ತು ಉದ್ಯಮಶೀಲತೆಯತ್ತ ಮಾರ್ಗನಕ್ಷೆ’: ವಿಶ್ವ ಉದ್ಯಮಿಗಳ ದಿನಾಚರಣೆ


ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ವಾಣಿಜ್ಯ ಸಂಘದ 2026-27ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡುವುದರೊಂದಿಗೆ ವಿಶ್ವ ಉದ್ಯಮಿಗಳ ದಿನವನ್ನು ಸೋಮವಾರ ಎಸ್‌ಜೆಎಂ ಸಭಾಂಗಣದಲ್ಲಿ ಆಚರಿಸಲಾಯಿತು.


‘ತರಗತಿಯಾಚೆ: ನವೀನತೆ ಮತ್ತು ಉದ್ಯಮಶೀಲತೆಯತ್ತ ಮಾರ್ಗನಕ್ಷೆ’ ಎಂಬ ಆಶಯದಡಿ ಆಯೋಜಿಸಲಾದ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಉದ್ಯಮಶೀಲ ಮನೋಭಾವ ಬೆಳೆಸುವುದು, ನವೀನ ಆಲೋಚನೆಗಳನ್ನು ಅನ್ವೇಷಿಸಲು ಪ್ರೋತ್ಸಾಹಿಸುವುದು ಹಾಗೂ ತರಗತಿಯ ಕಲಿಕೆಯನ್ನು ಮೀರಿ ಪ್ರಾಯೋಗಿಕ ಜ್ಞಾನ ಮತ್ತು ಕೌಶಲ್ಯಗಳನ್ನು ಗಳಿಸಲು ಅವಕಾಶ ಕಲ್ಪಿಸುವ ಉದ್ದೇಶವನ್ನು ಹೊಂದಿತ್ತು.


ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಮಂಗಳೂರಿನ ನಿಸರ್ಗ ಆಡ್ಸ್ ಆಂಡ್ ಇವೆಂಟ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್ ಡಿ. ಅವರು ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಪ್ರಸ್ತುತ ಸ್ಪರ್ಧಾತ್ಮಕ ಪರಿಸರದಲ್ಲಿ ನವೀನತೆ ಮತ್ತು ಉದ್ಯಮಶೀಲತೆ ದಿನದಿಂದ ದಿನಕ್ಕೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ ಎಂದು ಹೇಳಿ, ವಿದ್ಯಾರ್ಥಿಗಳು ಸಾಂಪ್ರದಾಯಿಕ ಉದ್ಯೋಗ ಆಯ್ಕೆಗಳಿಗಷ್ಟೇ ಸೀಮಿತರಾಗದೆ, ಹೊಸ ಅವಕಾಶಗಳನ್ನು ಗುರುತಿಸಿ, ಸೃಜನಶೀಲ ಆಲೋಚನೆಗಳನ್ನು ಬೆಳೆಸಿಕೊಂಡು, ಅವುಗಳನ್ನು ಯಶಸ್ವಿ ಉದ್ಯಮಗಳಾಗಿ ರೂಪಾಂತರಿಸುವ ಅಗತ್ಯವಿದೆ. ಉದ್ಯಮಶೀಲತೆಯ ಬೆಳವಣಿಗೆಯಲ್ಲಿ ಆತ್ಮವಿಶ್ವಾಸ, ಸಂವಹನ ಕೌಶಲ್ಯ, ನಾಯಕತ್ವ ಗುಣ, ಅಪಾಯಗಳನ್ನು ಎದುರಿಸುವ ಮನೋಭಾವ ಹಾಗೂ ಸಮಸ್ಯೆ ಪರಿಹರಿಸುವ ಸಾಮರ್ಥ್ಯಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಆಲೋಚನೆಗಳನ್ನು ಕಾರ್ಯರೂಪಕ್ಕೆ ತರುವ ಸಾಮರ್ಥ್ಯವೇ ಯಶಸ್ವಿ ಉದ್ಯಮಶೀಲತೆಯ ಪ್ರಮುಖ ಅಂಶವಾಗಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.


ವಾಣಿಜ್ಯ ವಿಭಾಗದ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article