ಸುಳ್ಯದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ: ಬೃಹತ್ ಪಂಜಿನ ಮೆರವಣಿಗೆ
ಬಳಿಕ ನಡೆದ ಅಖಂಡ ಭಾರತ ಸಂಕಲ್ಪ ದಿನಾಚರಣೆಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಮುರಳೀಕೃಷ್ಣ ಹಸಂತಡ್ಕ ದಿಕ್ಸೂಚಿ ಭಾಷಣ ಮಾಡಿದರು.
ಮುಖ್ಯ ಅತಿಥಿಯಾಗಿದ್ದ ಭೂಸೇನೆಯ ನಿವೃತ್ತ ಯೋಧ ಗುರುಪ್ರಸಾದ್ ರೈ ಪೇರಾಲುಗುತ್ತು ಅವರನ್ನು ಸನ್ಮಾನಿಸಲಾಯಿತು.
ವಿಶ್ವ ಹಿಂದೂ ಪರಿಷತ್ ಸುಳ್ಯ ನಗರದ ಅಧ್ಯಕ್ಷ ಉಪೇಂದ್ರ ನಾಯಕ್, ಭಜರಂಗದಳ ನಗರ ಸಂಯೋಜಕ ರಾಜೇಶ್ ಕಲ್ಲುಮುಟ್ಲು, ಜಿಲ್ಲಾ ಸಪ್ತಾಹಿಕ ಪ್ರಮುಖ್ ರೂಪೇಶ್ ಪೂಜಾರಿಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಭಜರಂಗದಳ ನಗರ ಸಂಯೋಜಕ ರಾಜೇಶ್ ಕಲ್ಲುಮುಟ್ಲು ಸ್ವಾಗತಿಸಿದರು. ವಿಶ್ವ ಹಿಂದೂ ಪರಿಷತ್ ತಾಲೂಕು ಕಾರ್ಯದರ್ಶಿ ನವೀನ್ ಎಲಿಮಲೆ ಅಖಂಡ ಭಾರತ ಸಂಕಲ್ಪ ದಿನದ ಪ್ರತಿಜ್ಞೆ ಬೋಧಿಸಿದರು. ಬಜರಂಗದಳ ತಾಲೂಕು ಸಹಸಂಯೋಜಕ ವರ್ಷಿತ್ ಚೊಕ್ಕಾಡಿ ವಂದಿಸಿದರು. ಗಿರೀಶ್ ಕುಂಠಿನಿ ಕಾರ್ಯಕ್ರಮ ನಿರೂಪಿಸಿದರು.
ಬಜರಂಗದಳ ತಾಲೂಕು ಸಂಯೋಜಕ ಹರಿಪ್ರಸಾದ್ ಎಲಿಮಲೆ, ಪ್ರಮುಖರಾದ ಹರೀಶ್ ಕಂಜಿಪಿಲಿ, ಶಶಿಕಲಾ ನೀರಬಿದಿರೆ, ಸುನಿಲ್ ಕೇರ್ಪಳ, ಸುದರ್ಶನ ಸೂರ್ತಿಲ, ಚಿದಾನಂದ ಗುಂಡ್ಯಡ್ಕ, ಲತೀಶ್ ಗುಂಡ್ಯ ಗಿರೀಶ್ ಕಲ್ಲುಗದ್ದೆ, ನಾರಾಯಣ ಎಸ್.ಎಂ. ಮತ್ತಿತರರು ಉಪಸ್ಥಿತರಿದ್ದರು.