ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ: ವಿಜೇತರಿಗೆ ಆಕರ್ಷಕ ನಗದು ಬಹುಮಾನ
ಈ ಸಂದರ್ಭದಲ್ಲಿ 'ಉಡುಪಿಗೆ ಬನ್ನಿ' ನಿರ್ವಾಹಕ ಡಾ. ಗಣೇಶ್ ಪ್ರಸಾದ್ ಜಿ. ನಾಯಕ್, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗೀಯ ಅಧ್ಯಕ್ಷರಾದ ಉದಯ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.
ಸ್ಪರ್ಧೆಯ ವಿವರ:
ಸ್ಪರ್ಧಿಗಳು ಸೆಪ್ಟೆಂಬರ್ 5 ರಂದು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ವಿಟ್ಲಪಿಂಡಿಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಆಯ್ದ ಅಂಶಗಳನ್ನು ರೀಲ್ಸ್ ನಲ್ಲಿ ಪ್ರಸ್ತುತಪಡಿಸಬೇಕು. ರೀಲ್ಸ್ ಅನ್ನು ಇನ್ಸ್ಟಾಗ್ರಾಮ್ ನಲ್ಲಿ ಪ್ರಕಟಿಸಿ 'ಉಡುಪಿಗೆ ಬನ್ನಿ' ಕೊಲೇಬೊರೇಟ್ ಮಾಡಬೇಕು. ರೀಲ್ಸ್ ಕಳುಹಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು ಫಲಿತಾಂಶವನ್ನು ಸೆಪ್ಟೆಂಬರ್ 19 ಕ್ಕೆ ಪ್ರಕಟಿಸಲಾಗುವುದು. ಪ್ರಥಮ ಬಹುಮಾನ ರೂ. ಹತ್ತು ಸಾವಿರ ಮತ್ತು ಪ್ರಶಸ್ತಿ ಪತ್ರ, ದ್ವಿತೀಯ ಬಹುಮಾನ ರೂ. ಐದು ಸಾವಿರ ಮತ್ತು ಪ್ರಶಸ್ತಿ ಪತ್ರ ಮತ್ತು 5 ಮಂದಿಗೆ ರೂ. ಒಂದು ಸಾವಿರ ಸಮಾಧಾನಕರ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಸ್ಪರ್ಧಿಸಿದ ಪ್ರತಿಯೊಬ್ಬರಿಗೂ ಪಾರ್ಟಿಸಿಪೇಶನ್ ಸರ್ಟಿಫಿಕೇಟ್ ನೀಡಲಾಗುವುದು ಮತ್ತು ಸ್ಪರ್ಧೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು 'ಉಡುಪಿಗೆ ಬನ್ನಿ' ಇನ್ಸ್ಟಗ್ರಾಮ್ ಪೇಜ್ ನಲ್ಲಿ ನೋಡಬಹುದು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.