ವಿಎಚ್ಪಿ ಅಂತಾರಾಷ್ಟ್ರಿಯ ಅಧ್ಯಕ್ಷರು ಧರ್ಮಸ್ಥಳಕ್ಕೆ ಭೇಟಿ
ಮೂಲತಃ ದೆಹಲಿಯವರಾದ ಅಲೋಕ್ ಕುಮಾರ್ ಅವರು ನವದೆಹಲಿಯ ಶಾಸಕರಾಗಿ, ವಿಧಾನಸಭೆ ಉಪಸಭಾಪತಿ ಆಗಿ ಗಮನಾರ್ಹ ಕೆಲಸ ಮಾಡಿದವರು. ದೆಹಲಿ ಹೈಕೋರ್ಟ್ ಹಾಗೂ ಸರ್ವೋಚ್ಛ ನ್ಯಾಯಾಲಯದ ಹಿರಿಯ ವಕೀಲರಾಗಿರುವ ಅವರು, ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವ ಮೈಗೂಡಿಸಿಕೊಂಡವರು. ಆರ್.ಎಸ್.ಎಸ್., ಬಿಜೆಪಿಯಲ್ಲಿ ಹಲವು ರಾಜ್ಯ, ರಾಷ್ಟ್ರಮಟ್ಟದ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ದೆಹಲಿಯ ಆರ್.ಎಸ್.ಎಸ್. ಸಹಸಂಘಚಾಲಕರಾಗಿಯೂ ಕೆಲಸ ಮಾಡಿದ್ದಾರೆ. ಭಾರತೀಯತೆಯನ್ನು ಉತ್ತೇಜಿಸುವ ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.
ವಿಹಿಂಪ ಅಂತಾರಾಷ್ಟ್ರೀಯ ಅಧ್ಯಕ್ಷರ ಭೇಟಿ ಸಂದರ್ಭ ವಿಹಿಂಪ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್, ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಭಾಗ ಮಠ ಮಂದಿರ ಪ್ರಮುಖ್ ಗಿರಿಪ್ರಕಾಶ್ ತಂತ್ರಿ, ಮಂಗಳೂರು ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ರೈ, ಕಡಬ ತಾಲೂಕಿನ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.
