ಮೂಡುಬಿದಿರೆ ಕಡಲಕೆರೆಗೆ 20,000 ಮೀನು ಮರಿಗಳ ಸಮಪ೯ಣೆ, ಬೋಟಿಂಗ್ ಗೆ ಚಾಲನೆ
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಕಾಶ್ ಅವರು ಮಾತನಾಡಿ ಅರಣ್ಯ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಬೇಕು ಹಾಗೂ ಕಡಲಕೆರೆಗೆ ಕಾಖಾ೯ನೆಗಳಿಂದ ಕಲುಷಿತ ನೀರನ್ನು ಬಿಡದಂತೆ ಎಚ್ಚರ ವಹಿಸಬೇಕೆಂದರು.
ಸಾಲು ಮರ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ವನ ಮಹೋತ್ಸವ ಆಚರಿಸಲಾಯಿತು.
ಪುರಸಭೆಯ ಮುಖ್ಯಾಧಿಕಾರಿ ಇಂದು ಎಂ, ಸಾವ೯ಜನಿಕ ಗಣೇಶೋತ್ಸವ ಟ್ರಸ್ಟ್ನ ಅಧ್ಯಕ್ಷ ನಾರಾಯಣ ಪಿ. ಎಂ, ರೋಟರಿ ಕ್ಲಬ್ ಅಧ್ಯಕ್ಷ ಡಾ. ಆಶೀರ್ವಾದ್, ಕಾಯ೯ದಶಿ೯ ಪ್ರಜ್ವಲ್ ಆಚಾರ್, ರೋಟರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪಿ. ಕೆ. ತೋಮಸ್, ಪುರಸಭೆಯ ಮಾಜಿ ಉಪಾಧ್ಯಕ್ಷ ನಾಗರಾಜ ಪೂಜಾರಿ, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ನಿಶ್ಮಿತಾ, ಹಿರಿಯ ನ್ಯಾಯವಾದಿ ಕೆ. ಆರ್. ಪಂಡಿತ್, ದೋಣಿ ವಿಹಾರದ ನಿವಾ೯ಹಕರಾದ ಡಾ. ಎಂ.ಎಸ್. ನಝೀರ್ ಉಪಸ್ಥಿತರಿದ್ದರು.
ಉಪ ವಲಯಾರಣ್ಯಾಧಿಕಾರಿಗಳಾದ ಕೃಷ್ಣಮೂರ್ತಿ, ಬಸಪ್ಪ, ಗಸ್ತು ಅರಣ್ಯ ಪಾಲಕರು ಈ ಸಂದಭ೯ದಲ್ಲಿದ್ದರು.
ಮಂಗಳೂರು ವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಸ್ವಾಗತಿಸಿ ವಂದಿಸಿದರು.
