ಮಂಗಳೂರು ವಿವಿ ಕ್ರಾಸ್ಕಂಟ್ರಿಯಲ್ಲಿ ಆಳ್ವಾಸ್ ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್: ಸತತ 23ನೇ ಬಾರಿ ಪುರುಷ–ಮಹಿಳಾ ವಿಭಾಗದಲ್ಲಿ ಪ್ರಶಸ್ತಿ; 12 ಕ್ರೀಡಾಪಟುಗಳು ಅಖಿಲ ಭಾರತ ಮಟ್ಟಕ್ಕೆ ಆಯ್ಕೆ
ಮಹಿಳೆಯರ ವಿಭಾಗದಲ್ಲಿಯೂ ಆಳ್ವಾಸ್ ತಂಡ 10 ಅಂಕಗಳೊಂದಿಗೆ ಸಮಗ್ರ ಚಾಂಪಿಯನ್ಶಿಪ್ ಪಡೆದು ಕೈಕುರೆ ಶ್ರೀ ರಾಮಣ್ಣ ಗೌಡ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಭಾಗೀರಥಿ ಪ್ರಥಮ, ಯಾಶಿ ದ್ವಿತೀಯ ಹಾಗೂ ಆರತಿ ತೃತೀಯ ಸ್ಥಾನ ಪಡೆದರು. ಆರಾಧನಾ ನಾಲ್ಕನೇ, ಆರತಿ ಅರ್ಜುನ್ ಐದನೇ ಹಾಗೂ ಜ್ಯೋತಿ ಏಳನೇ ಸ್ಥಾನ ಗಳಿಸಿ ತಂಡದ ಚಾಂಪಿಯನ್ಶಿಪ್ಗೆ ಬಲ ತುಂಬಿದರು.
ಈ ಚಾಂಪಿಯನ್ಶಿಪ್ನ ಮತ್ತೊಂದು ಗಮನಾರ್ಹ ಸಾಧನೆಯೆಂದರೆ, ನವೆಂಬರ್ನಲ್ಲಿ ಉಡುಪಿಯಲ್ಲಿ ನಡೆಯಲಿರುವ ಅಖಿಲ ಭಾರತ ಪುರುಷರ ಹಾಗೂ ಮಹಿಳೆಯರ ಕ್ರಾಸ್ಕಂಟ್ರಿ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲು ಆಳ್ವಾಸ್ನ 12 ಕ್ರೀಡಾಪಟುಗಳನ್ನು ಅರ್ಹತೆ ಪಡೆದುಕೊಂಡಿದ್ದಾರೆ. ಈ ಮೂಲಕ ರಾಷ್ಟ್ರೀಯ ಮಟ್ಟದ ಕ್ರಾಸ್ಕಂಟ್ರಿ ಕ್ರೀಡಾಕೂಟದಲ್ಲಿ ಪುರುಷರ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ಮಂಗಳೂರು ವಿವಿಯನ್ನು ಆಳ್ವಾಸ್ನ ವಿದ್ಯಾಥಿಗಳೇ ಪ್ರತಿನಿಧಿಸಲಿದ್ದಾರೆ.
ಸಮಗ್ರ ಚಾಂಪಿಯನ್ಶಿಪ್ ಗೆದ್ದ ಕ್ರೀಡಾಪಟುಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ
