ಎ.ಜಿ. ಸೋನ್ಸ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ದುರಂತಗಳ ಬಗ್ಗೆ ಪ್ರಾತ್ಯಕ್ಷಿಕೆ
Thursday, September 3, 2026
ಮೂಡುಬಿದಿರೆ: ಇಲ್ಲಿನ ಎ.ಜಿ ಸೋನ್ಸ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೂಡುಬಿದಿರೆಯ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಅಗ್ನಿ ದುರಂತಗಳ ಬಗ್ಗೆ ಹಾಗೂ ಅಗ್ನಿ ಶಮನ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಯ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಗುರುವಾರ ನಡೆಯಿತು.
ಠಾಣಾಧಿಕಾರಿಗಳಾದ ದಿವಾಕರ್ ಆಚಾರ್ಯ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಮಹಾವೀರ ಕಾಲೇಜ್ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್, ಪ್ರಾಂಶುಪಾಲರಾದ ಶ್ರೀಕಾಂತ್ ಹೊಳ್ಳ, ಅಧ್ಯಾಪಕ ವೃಂದದವರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ಗಳು ಹಾಜರಿದ್ದರು.