ಸಂತ ಫಿಲೋಮಿನಾ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ
ಭಾಷೆಯನ್ನು ಗೌರವಿಸುವುದರೊಂದಿಗೆ ಅದರ ನಿಜವಾದ ಉದ್ದೇಶವನ್ನು ಅರಿಯಬೇಕು: ವ. ಡಾ. ಆಂಟನಿ ಪ್ರಕಾಶ್ ಮೊಂತೇರೊ
ಭಾರತದ ವೈವಿಧ್ಯಮಯ ಸಂಸ್ಕೃತಿ ಮತ್ತು ವಿವಿಧ ಭಾಷಿಕ ಸಮುದಾಯಗಳ ನಡುವೆ ಸಂವಹನದ ಸೇತುವೆಯಾಗಿ ಹಿಂದಿ ಕಾರ್ಯನಿರ್ವಹಿಸುತ್ತದೆ. ಹಿಂದಿ ದಿವಸ್ ಕಬೀರ್, ತುಲಸೀದಾಸ್ ಹಾಗೂ ಪ್ರೇಮ್ಚಂದ್ ಅವರಂತಹ ಮಹಾನ್ ಸಾಹಿತ್ಯ ದಿಗ್ಗಜರ ಶ್ರೀಮಂತ ಸಾಹಿತ್ಯ ಪರಂಪರೆಯನ್ನು ಸ್ಮರಿಸುವುದರ ಜೊತೆಗೆ, ಯುವ ಪೀಳಿಗೆಯಲ್ಲಿ ಭಾಷಾ ಜ್ಞಾನ, ಕೌಶಲ್ಯ ಹಾಗೂ ರಾಷ್ಟ್ರೀಯ ಏಕತೆಯ ಭಾವನೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಹಿಂದಿ ದಿವಸ್ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿ ಸಂಯೋಜಕ ಅಶ್ವಿನ್ ಮೊಂತೇರೊ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಿಂಪಲ್ ಮಿಶೆಲ್ ತಾವ್ರೊ ಸಹಕರಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಏಂಜಲ್ ಮತ್ತು ಬಳಗದವರು ಪ್ರಾರ್ಥನೆ ನೆರವೇರಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಡಿಂಪಲ್ ಜೇನಿಫರ್ ಫೆರ್ನಾಂಡಿಸ್ ಸ್ವಾಗತಿಸಿದರು. ದ್ವಿತೀಯ ಬಿ.ಎ. ವಿಭಾಗದ ಮನೀಶ್ ವಂದಿಸಿದರು. ದ್ವಿತೀಯ ಬಿ.ಸಿ.ಎ. ವಿಭಾಗದ ಭಾರದ್ವಾಜ್ ಭಂಡಾರ್ಕರ್ ಕಾರ್ಯಕ್ರಮ ನಿರೂಪಿಸಿದರು.

